ಜಿಲ್ಲೆಯಿಂದ 360ಸರ್ಕಾರಿ ನೌಕರರು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಸುದ್ದಿ ಕಡೂರು : 2022-23ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟವು ತುಮಕೂರಿನ ಜಿಲ್ಲಾ ಕ್ರೀಡಾಂಗಣದಲ್ಲಿ ಅ.27 ರಿಂದ 29ರವರೆಗೆ ನಡೆಯಲಿದೆ ಎಂದು ಕಡೂರು ತಾಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಅರೇಹಳ್ಳಿ ಮಲ್ಲಿಕಾರ್ಜುನ್ ತಿಳಿಸಿದರು.
ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು 360 ಕ್ರೀಡಾಪಟುಗಳು ಅದರಲ್ಲಿ ಕಡೂರು ತಾಲೂಕಿನ 98 ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ. ರಾಜ್ಯಮಟ್ಟದ ಕ್ರೀಡಾಕೂಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕ್ರೀಡಾ ಸಚಿವ ಬಿ.ನಾಗೇಂದ್ರ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಭಾಗವಹಿಸಲಿದ್ದಾರೆ ಎಂದರು.
2023 ರ ಜುಲೈನಿಂದ ಬಾಕಿ ಇದ್ದ ಸರ್ಕಾರಿ ನೌಕರರಿಗೆ ನೀಡಬೇಕಾಗಿದ್ದ ತುಟ್ಟಿಭತ್ಯೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 3.75ರಷ್ಟು ಹೆಚ್ಚಿಸಿ ಆದೇಶ ನೀಡಿರುವ ಹಿನ್ನಲೆಯಲ್ಲಿ ತಾಲೂಕು ನೌಕರರ ಪರವಾಗಿ ಸರಕಾರಕ್ಕೆ ಅಭಿನಂದಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ನೌಕರ ಸಂಘದ ಕಾರ್ಯದರ್ಶಿ ಅನಿಲ್‌ಕುಮಾರ್, ರಾಜ್ಯ ಪರಿಷತ್ ಕೆ.ಆರ್. ಸುರೇಶ್, ಖಜಾಂಚಿ ರಾಜು ಒಡೆಯರ್, ಗೌರವಾಧ್ಯಕ್ಷ ಜಿ.ಎಂ.ರಾಜಶೇಖರ್ ಮತ್ತಿತರಿದ್ದರು.

Leave a Reply

Your email address will not be published. Required fields are marked *

error: Content is protected !!