ಸಖರಾಯಪಟ್ಟಣದಲ್ಲಿ ಶಾಸಕರ ಜನಸ್ಪಂದನಾ ಕಚೇರಿ ಉದ್ಘಾಟನೆ

ಸುದ್ದಿ ಸಖರಾಯಪಟ್ಟಣ :ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಶುಕ್ರವಾರ ಶಾಸಕ ಎಚ್.ಡಿ. ತಮ್ಮಯ್ಯ  ಕಚೇರಿ ಉದ್ಘಾಟನೆ ಮಾಡಿದರು.

ಬಳಿಕ ಮಾತನಾಡಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಚೇರಿಯಾಗಿ ಮಾರ್ಪಡಲಿದೆ. ಈ ಭಾಗದ ಹಲವು ಸಮಸ್ಯಗಳಲ್ಲಿ ಪರಿತಪಿಸುತ್ತಿರುವ ಗ್ರಾಮೀಣ ಜನತೆಗೆ ಸುಲಲಿತವಾಗಿ ಕೆಲಸವಾಗಲು ಪ್ರತ್ಯೇಕವಾಗಿ ಕಚೇರಿಯನ್ನು ಆರಂಭಿಸಲಾಗಿದೆ ಈ ಭಾಗದ ಮುಕ್ತವಾಗಿ ಸಮಸ್ಯೆಗಳನ್ನು ಹೇಳಿಕೊಳ್ಳಬಹುದಾಗಿದೆ. ಜನರ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಪರಿಹರಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಕಾಂಗ್ರೆಸ್  ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಕೆ.ಪಿ ಅಂಶುಮಂತ್, ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಡಿಮನೆ ಸತೀಶ್, ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಎಂ. ಸಂದೀಪ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ ಶಿವಾನಂದಸ್ವಾಮಿ‌ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.

Leave a Reply

Your email address will not be published. Required fields are marked *

error: Content is protected !!