ಕಡೂರಿನಲ್ಲಿ ಸುರಿದ ಧಾರಾಕಾರ ಮಳೆಗೆ ಜಲಾವೃತಗೊಂಡ ರಸ್ತೆಗಳು

ಸುದ್ದಿ ಕಡೂರು: ತಾಲ್ಲೂಕಿನಾದ್ಯಂತ ಬುಧವಾರ ಸಂಜೆ ಗುಡುಗು ಮಿಂಚಿನೊಂದಿಗೆ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಳಿಸಿತು.
ಸುಮಾರು 2 ತಾಸಿಗೂ ಹೆಚ್ಚು ಕಾಲ ಸುರಿದ ಮಳೆಗೆ ಪಟ್ಟಣದ ಬಸವೇಶ್ವರ ವೃತ್ತದ ಬಳಿಯ ರಸ್ತೆಯು ಸಂಪೂರ್ಣ ಜಲಾವೃತಗೊಂಡು ತಗ್ಗುಪ್ರದೇಶದ ಅಂಗಡಿಮುಗ್ಗಟ್ಟುಗಳಿಗೆ ನೀರು‌ ನುಗ್ಗಿದವು. ಕಡೂರು ಪಟ್ಟಣದಲ್ಲಿ ಸಂಜೆ ನಾಲ್ಕು ಗಂಟೆಗೆ ಕಾರ್ಮೋಡ ಕವಿದು ಬಹುತೇಕ ಕತ್ತಲು ಆವರಿಸಿತು. ವಾಹನಗಳು ಲೈಟ್ ಹಾಕಿಕೊಂಡು ಸಂಚರಿಸಬೇಕಾದ ಪರಿಸ್ಥಿತಿ ಎದುರಾಯಿತು. ಬಿರುಸಾಗಿ ಆರಂಭಗೊಂಡ ಮಳೆಗೆ ರಸ್ತೆಗಳ ಮೇಲೆ ಎರಡು ಅಡಿಗೂ ಹೆಚ್ಚು ನೀರು ಹರಿದು ವಾಹನ ಸವಾರರು ಪರದಾಡಿದರು. ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ತಾಲ್ಲೂಕಿನ ಮಾಡಾಳು ಗ್ರಾಮದ ಕೃಷ್ಣಪ್ಪ ಎಂಬುವವರ
ಮನೆಯು ಭಾಗಶಃ ಹಾನಿಯಾಗಿರುವುದಾಗಿ ತಿಳಿದು ಬಂದಿದೆ.

 

Leave a Reply

Your email address will not be published. Required fields are marked *

error: Content is protected !!