ವಿದ್ಯುತ್‌ ತಂತಿಯ ಶಾಕ್‌ ನಿಂದ ಪಟ್ಟಣಗೆರೆ ಗ್ರಾಮದ ಯುವಕ ಸಾವು

ಸುದ್ದಿಕಡೂರು : ತಾಲ್ಲೂಕಿನ ಪಟ್ಟಣಗೆರೆ ಗ್ರಾಮದ ಯುವಕನೋರ್ವನು ವಿದ್ಯುತ್ ತಂತಿ ತಗುಲಿ ಭಾನುವಾರ ಮೃತಪಟ್ಟಿದ್ದಾನೆ. ಅಭಿಷೇಕ್(27) ಮೃತಪಟ್ಟ ದುರ್ದೈವಿಯಾಗಿದ್ದು, ಭಾನುವಾರ ಸಂಜೆ ತೋಟದಲ್ಲಿ ತೆಂಗಿನ ಮರದ ಕಾಯಿಗಳನ್ನು ತೆಗೆಯುವಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲಿಯೇ ಅಸುನೀಗಿದ್ದಾನೆ ಎನ್ನಲಾಗಿದೆ. ಕಡೂರು ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ಮೃತದೇಹವನ್ನು ಇರಿಸಲಾಗಿದೆ. ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!