ಮೂರು ರಾಜ್ಯಗಳ ಬಿಜೆಪಿ ಅಭೂತಪೂರ್ವ ಗೆಲುವು: ಬೆಳ್ಳಿಪ್ರಕಾಶ್ ನೇತೃತ್ವದಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ

ಸುದ್ದಿ ಕಡೂರು : ರಾಜಾಸ್ತಾನ್, ಮಧ್ಯಪ್ರದೇಶ ಹಾಗೂ ಛತ್ತಿಸ್‌ಗಡ್ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಸ್ಪಷ್ಟ ಬಹುಮತ ಪಡೆದು ಆಡಳಿತದ ಚುಕ್ಕಾಣಿ ಹಿಡಿದ ಹಿನ್ನಲೆಯಲ್ಲಿ ಪಟ್ಟಣದ ಬಿಜೆಪಿ ಮಂಡಲದ ವತಿಯಿಂದ ಮಾಜಿ ಶಾಸಕ ಬೆಳ್ಳಿಪ್ರಕಾಶ್ ನೇತೃತ್ವದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿಹಂಚಿ ಸಂಭ್ರಮಿಸಿದರು.

ಬಳಿಕ ಅಫೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿಪ್ರಕಾಶ್ ಮಾತನಾಡಿ, ದೇಶದ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಭಾನುವಾರ ಮತ ಏಣಿಕೆ ನಡೆದು ಮೂರು ರಾಜ್ಯಗಳಲ್ಲಿ ಬಿಜೆಪಿ ಪಕ್ಷ ಬಹುಮತ ಪಡೆಯುವುದರ ಮೂಲಕ ಆಡಳಿತದ ತೆಕ್ಕೆಗೆ ಲಭಿಸಿದ್ದು, ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದಂತಾಗಿದೆ. ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಮಂತ್ರಿಯಾಗುವುದರಲ್ಲಿ ಸಂದೇಹವಿಲ್ಲ. ಬಿಜೆಪಿ ಸೈದ್ದಾಂತಿಕ ಮತ್ತು ತನ್ನ ಬದ್ದತೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆ. ತೆಲಂಗಾಣ ರಾಜ್ಯದಲ್ಲಿಯೂ ಕೂಡ ಕಳೆದ ವಿಧಾನಸಭೆ ಚುನಾವಣೆಗಿಂತ ಈ ಬಾರಿಯ ಫಲಿತಾಂಶದಲ್ಲಿ ತನ್ನ ವಿಧಾನಸಭೆ ಕ್ಷೇತ್ರಗಳನ್ನು ಹೆಚ್ಚಿಸಿಕೊಂಡಿರುವುದು ಉತ್ತಮ ಸ್ಪರ್ಧೆ ನೀಡಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಬಿ.ಪಿ.ದೇವಾನಂದ್, ಜಿಪಂ ಮಾಜಿ ಸದಸ್ಯ ಕೆ.ಆರ್.ಮಹೇಶ್‌ಒಡೆಯರ್, ಮುಖಂಡರಾದ ರಾಜಾನಾಯ್ಕ್, ಜಿಗಣೇಹಳ್ಳಿ ನೀಲಕಂಠಪ್ಪ, ದಾನಿಉಮೇಶ್, ಮಚ್ಚೇರಿ ಸತೀಶ್, ಓಂಕಾರಪ್ಪ, ಚಿನ್ನರಾಜು, ಜಿಮ್‌ರಾಜು, ಕೆ.ಎನ್. ಬೊಮ್ಮಣ್ಣ, ಮಾರ್ಗದಮಧು, ಮಣಿ, ಹುಲಿಕೆರೆ ಮಹೇಶ್, ಜಿ.ಸೋಮಯ್ಯ, ಸಂದೇಶ್‌ಕುಮಾರ್, ಕೆ.ಎಸ್. ಮಂಜುನಾಥ್, ಶೂದ್ರಶ್ರೀನಿವಾಸ್, ಗೋವಿಂದರಾಜು, ಅಜೇಯ್‌ಒಡೆಯರ್. ಸಿದ್ದಪ್ಪ, ಟಿ.ಆರ್.ಲಕ್ಕಪ್ಪ, ಮಲ್ಲಿಕಾರ್ಜುನ್, ಆಕಾಶ ಕೊಠಾರಿ, ಕೆ.ಆರ್.ಚಂದ್ರು ಮತ್ತಿತರಿದ್ದರು.

Leave a Reply

Your email address will not be published. Required fields are marked *

error: Content is protected !!