ಸುದ್ದಿ ಚಿಕ್ಕಮಗಳೂರು: ತೋಟಗಾರಿಕೆ ಇಲಾಖೆ ವತಿಯಿಂದ 2023-24 ನೇ ಸಾಲಿನ ಫಲಪುಷ್ಪ ಪ್ರದರ್ಶನವನ್ನು ಜನವರಿ 26 ರಿಂದ 28 ರವರೆಗೆ ಬೋಳರಾಮೇಶ್ವರ ದೇವಸ್ಥಾನದ ಹತ್ತಿರ ಆಯೋಜಿಸಲಾಗಿದೆ.
ಜಿಲ್ಲೆಯ ಎಸ್ಟೇಟ್ ಉದ್ಯಾನವನಗಳ ಮಾಲೀಕರು ಹಾಗೂ ಚಿಕ್ಕಮಗಳೂರು ನಗರ ವಾಸಿಗಳು ತಮ್ಮ ತಮ್ಮ ಉದ್ಯಾನವನಗಳ ಉತ್ತಮ ನಿರ್ವಹಣೆಗಾಗಿ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.
ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಜನವರಿ 12ರಂದು ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕರ ಕಛೇರಿಯನ್ನು (ದೂ.ಸಂ. 08262-295043) ಕಛೇರಿ ವೇಳೆಯಲ್ಲಿ ಸಂಪರ್ಕಿಸಿಬಹುದಾಗಿದೆ ಎಂದು ಪದನಿಮಿತ್ತ ಕಾರ್ಯದರ್ಶಿಗಳು ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.