ಕಡೂರಹಳ್ಳಿ ವಿಎಸ್‌ಎಸ್‌ಎನ್‌ ಅಧ್ಯಕ್ಷರಾಗಿ ಡಿ.ಪ್ರಶಾಂತ್‌ ಅವಿರೋಧ ಆಯ್ಕೆ

ಸುದ್ದಿ ಕಡೂರು : ತಾಲ್ಲೂಕಿನ ಕಡೂರಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಡಿ. ಪ್ರಶಾಂತ್ ಸೋಮವಾರ ಅವಿರೋಧವಾಗಿ ಆಯ್ಕೆಯಾದರು.
ಈ ಹಿಂದಿನ ಅಧ್ಯಕ್ಷರಾಗಿದ್ದ ಕೃಷ್ಣಮೂರ್ತಿ ರಾಜೀನಾಮೆಯಿಂದ ಸ್ಥಾನ ತೆರವಾಗಿತ್ತು. ಚುನಾವಣಾಧಿಕಾರಿಯಾಗಿ ಸಹಕಾರ ಸಂಘದ ಅಭಿವೃದ್ದಿ ಅಧಿಕಾರಿ ಅನುಪಮಾ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಬಳಿಕ ನಡೆದ ಅಭಿನಂದನಾ ಸಭೆಯಲ್ಲಿ ನೂತನ ಅಧ್ಯಕ್ಷ ಡಿ. ಪ್ರಶಾಂತ್ ಮಾತನಾಡಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ರುದ್ರಪ್ಪ, ನಿರ್ದೇಶಕರಾದ ಜಿಗಣೇಹಳ್ಳಿ ನೀಲಕಂಠಪ್ಪ, ಬಳ್ಳೇಕೆರೆ ವಿಶ್ವನಾಥ್, ಈಶ್ವರಪ್ಪ, ರಾಜಪ್ಪ, ತೇಜರಾಜ್, ದ್ರಾಕ್ಷಯಣಮ್ಮ, ನಿರ್ಮಲ, ರಂಗಪ್ಪ, ವ್ಯವಸ್ಥಾಪಕ ಗಂಗಾಧರ್‌ನಾಯ್ಕ್ ಮತ್ತಿತರಿದ್ದರು.

Leave a Reply

Your email address will not be published. Required fields are marked *

error: Content is protected !!