ಸುದ್ದಿ ಕಡೂರು : ಪಟ್ಟಣದಲ್ಲಿ ತಾಲ್ಲೂಕು ಬಂಜಾರ ಸಮಾಜದ ವತಿಯಿಂದ ಮಾ.11ಕ್ಕೆ ಅದ್ದೂರಿಯಾಗಿ ಶ್ರೀ ಸಂತಸೇವಾಲಾಲ್ ಜಯಂತಿಯನ್ನು ಆಚರಿಸಲಾಗುತ್ತದೆ ಎಂದು ಬಂಜಾರ ಸಮಾಜದ ತಾಲ್ಲೂಕು ಅಧ್ಯಕ್ಷ ಕುಮಾರ್ ನಾಯ್ಕ್ ತಿಳಿಸಿದರು.
ಪಟ್ಟಣದಲ್ಲಿ ಮಾತನಾಡಿ, ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಲು ಕ್ಷೇತ್ರದ ಶಾಸಕರಾದ ಕೆ.ಎಸ್.ಆನಂದ್ ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದ್ದು, ಬಹುತೇಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ. ಪಟ್ಟಣದ ಗಣಪತಿ ಪೆಂಡಾಲ್ ಆವರಣದಲ್ಲಿ ವೇದಿಕೆ ಸಮಾರಂಭವನ್ನು ನಡೆಸಲಿದ್ದು. ಬಿ.ಎಚ್.ರಸ್ತೆಯ ವೆಂಕಟೇಶ್ವರ ದೇವಾಲಯದಿಂದ ವಿವಿಧ ಜಾನಪದ ಕಲಾತಂಡಗಳೊ೦ದಿಗೆ ಅದ್ದೂರಿಯ ಮೆರವಣಿಗೆಯನ್ನು ನಡೆಸಲಾಗುವುದು ಎಂದರು.
ಸಮಾರಂಭದಲ್ಲಿ ಸಮಾಜದ ಗುರುಗಳಾದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು. ಶಾಸಕ ಕೆ.ಎಸ್.ಆನಂದ್ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಹೆಸರಾಂತ ಗಾಯಕಿ ಮಂಗ್ಲಿಬಾಯಿ, ಸರಿಗಮಪ ಗಾಯಕ ರಮೇಶ್ ಲಮಾಣಿ, ಮಾಜಿ ಸಚಿವೆ ಹಾಗೂ ಸಾಹಿತಿ ಬಿ.ಟಿ. ಲಲಿತಾನಾಯ್ಕ್ ಆಗಮಿಸಲಿದ್ದಾರೆ. ತಾಲ್ಲೂಕಿನ ಎಲ್ಲಾ ತಾಂಡಗಳಿ೦ದ ಸಾವಿರಾರು ಸಂಖ್ಯೆಯಲ್ಲಿ ಸಮಾಜದ ಬಾಂಧವರು ಭಾಗವಹಿಸಲಿದ್ದಾರೆ. ಬಂಜಾರ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು ಸಮಾಜದ ಜಯಂತಿ ಕಾರ್ಯಕ್ರಮಕ್ಕೆ ಕೈ ಜೋಡಿಸುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಸತೀಶ್ನಾಯ್ಕ್, ಪ್ರಕಾಶ್ನಾಯ್ಕ್, ಶ್ರೀನಿವಾಸ್ನಾಯ್ಕ್, ಪಾಂಡಣ್ಣ, ರಾಮಚಂದ್ರನಾಯ್ಕ್, ನಾರಾಯಣ್ನಾಯ್ಕ್, ಬಾಲಾಜಿ ನಾಯ್ಕ್, ಗೋವಿಂದನಾಯ್ಕ್, ಕೃಷ್ಣನಾಯ್ಕ್ ಮತ್ತಿತರಿದ್ದರು.