ನಾಳೆ ಕಡೂರಿಗೆ ಜೆಡಿಎಸ್‌ ವರಿಷ್ಠ ದೇವೇಗೌಡ ಆಗಮನ

ಸುದ್ದಿ ಕಡೂರು : ಲೋಕಸಭಾ ಚುನಾವಣೆ ತಯಾರಿಯ ಹಿನ್ನಲೆಯಲ್ಲಿ ಪಟ್ಟಣದ ಲಕ್ಷ್ಮೀ ವೆಂಕಟೇಶ್ವರ ಗೀತಾಮಂದಿರದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯು ಮಾ. 15ರ ಶುಕ್ರವಾರ ಬೆಳಿಗ್ಗೆ 11ಗಂಟೆಗೆ ಏರ್ಪಡಿಸಲಾಗಿದ್ದು. ಮಾಜಿಪ್ರಧಾನಿ ಎಚ್.ಡಿ. ದೇವೇಗೌಡರು ಪಕ್ಷದ ಕಾರ್ಯಕರ್ತರ ಸಭೆಗೆ ಹೆಲಿಕ್ಯಾಪ್ಟರ್ ಮೂಲಕ ಪೊಲೀಸ್ ತರಬೇತಿ ಕೇಂದ್ರದ ಬಳಿ ಆಗಮಿಸಲಿದ್ದಾರೆ. ಬಳಿಕ ಯುವಮುಖಂಡ ಚೇತನ್‌ಕೆಂಪರಾಜ್ ಪಕ್ಷಸೇರ್ಪಡೆ ಹಿನ್ನಲೆಯಲ್ಲಿ ನಿವಾಸಕ್ಕೆ ತೆರಳಿ ನಂತರ ಪಕ್ಷದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಜೆಡಿಎಸ್ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಬಳಿಕ ಮಾಜಿ ಶಾಸಕ ಬೆಳ್ಳಿಪ್ರಕಾಶ್ ಅವರ ನಿವಾಸದಲ್ಲಿ ಭೋಜನ ಸವಿದು ನಿರ್ಗಮಿಸಲಿದ್ದಾರೆ ಎಂದು ಮಾಜಿ ಶಾಸಕ ವೈ.ಎಸ್.ವಿ. ದತ್ತ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!