ಮಾ.24ಕ್ಕೆ ಕಡೂರು ಬಳಿ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶ ; ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್ ಭೇಟಿ

ಸುದ್ದಿ ಕಡೂರು : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮಾ.24ರಂದು ಪಟ್ಟಣಕ್ಕೆ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಆಗಮಿಸಲಿದ್ದು ಅಂದು ಪಕ್ಷದ ಕಾರ್ಯಕರ್ತರ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದು  ಕಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಸೂರು ಚಂದ್ರಮೌಳಿ ತಿಳಿಸಿದರು.
ಕಡೂರು ವಿಧಾನ ಸಭಾ ಕ್ಷೇತ್ರ ಹಾಸನ ಲೋಕಸಭಾ ವ್ಯಾಪ್ತಿಗೆ ಒಳಪಡುವುದರಿಂದ ಭಾನುವಾರ ಶಾಸಕ ಕೆ.ಎಸ್.ಆನಂದ್ ನೇತೃತ್ವದಲ್ಲಿ ಮಚ್ಚೇರಿಯ ಬೆಂಕಿ ಲಕ್ಷ್ಮಯ್ಯ ಮಂಟಪದಲ್ಲಿ ಕಡೂರು ವಿಧಾನಸಭಾ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ನಡೆಸಲಾಗುತ್ತಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ,ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳಾದ ಲಕ್ಷ್ಮಣ್,ಅಂಶುಮಂತ್ ಮತ್ತು ಎರಡೂ ಜಿಲ್ಲೆಗಳ ವಿವಿಧ ಕಾಂಗ್ರೆಸ್ ಸಮಿತಿಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಬೀರೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಸಂದಿ ಕಲ್ಲೇಶ್,ಮುಖಂಡರಾದ ವಿನಯ್,ಆಬೀದ್ ಪಾಶ,ಶಿವೇಗೌಡ,ಸಂತೋಷ್ ಮತ್ತಿತರರಿದ್ದರು.

Leave a Reply

Your email address will not be published. Required fields are marked *

error: Content is protected !!