ಯಳ್ಳಂಬಳಸೆ ಗ್ರಾಪಂ ಅಧ್ಯಕ್ಷೆಯಾಗಿ ಪ್ರೇಮಾವತಿ ಕೇಶವ್‌ ಅವಿರೋಧ ಆಯ್ಕೆ

ಸುದ್ದಿ ಕಡೂರು : ತಾಲ್ಲೂಕಿನ ಯಳ್ಳಂಬಳಸೆ ಗ್ರಾಪಂ ಅಧ್ಯಕ್ಷೆಯಾಗಿ ಎಸ್.ಡಿ. ಪ್ರೇಮಾವತಿ ಕೇಶವ್ ಸೋಮವಾರ ಅವಿರೋಧವಾಗಿ ಆಯ್ಕೆಯಾದರು. ಈ ಹಿಂದಿನ ಅಧ್ಯಕ್ಷರಾಗಿದ್ದ ಸೈಯದ್ ಸಲೀಂ ಅವರ ರಾಜೀನಾಮೆಯಿಂದ ಸ್ಥಾನ ತೆರವಾಗಿತ್ತು. ಚುನಾವಣಾಧಿಕಾರಿಯಾಗಿ ಬೀರೂರು ಕ್ಷೇತ್ರ ಶಿಕ್ಷಣಾಧಿಕಾರಿ ಗಂಗಾಧರಪ್ಪ ಕಾರ್ಯನಿರ್ವಹಿಸಿದರು.
ಬಳಿಕ ಪಂಚಾಯಿತಿ ಕಚೇರಿಯಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ನೂತನ ಅಧ್ಯಕ್ಷೆ ಪ್ರೇಮಾವತಿ ಕೇಶವ್ ಮಾತನಾಡಿ, ಪಂಚಾಯಿತಿ ಸದಸ್ಯರ ಸಹಕಾರದೊಂದಿಗೆ ಗ್ರಾಮಗಳ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಿ ಕಾರ್ಯ ನಿರ್ವಹಿಸಲಾಗುತ್ತದೆ. ಅಗತ್ಯ ಮೂಲಭೂತ ಸೌಲಭ್ಯಗಳನ್ನು ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಪುಷ್ಪಲತಾ ಸೋಮೇಶ್, ಸದಸ್ಯರಾದ ಶ್ರೀನಿವಾಸ್, ನವೀನ್, ಚೈತ್ರಾ, ದೀಪಾ, ಮಂಜುಶ್ರೀ, ಯಳಗೊಂಡನಹಳ್ಳಿ ಈಶ್ವರಪ್ಪ, ಸೋಮೇಶ್ ಗ್ರಾಮದ ಮುಖಂಡರಾದ ನಾಗರಾಜ್, ತಿಮ್ಮಯ್ಯ, ಮುದಿಯಪ್ಪ, ಶೇಖರ್, ವೈ.ಡಿ. ನಾಗಣ್ಣ, ರುದ್ರಯ್ಯ, ಸಿ.ಸಿ. ದೇವರಾಜ್, ಅಯೂಬ್‌ಖಾನ್, ಮಿಲ್ಟಿçರಮೇಶ್, ಪಿಡಿಒ ವಸಂತ್ ಹಾಗೂ ಸಿಬ್ಬಂದಿಗಳು ಇದ್ದರು.

Leave a Reply

Your email address will not be published. Required fields are marked *

error: Content is protected !!