ಯುವನಿಧಿ ಸಮಾವೇಶಕ್ಕೆ ಉಚಿತ ಸಾರಿಗೆ ಬಸ್‌! ; ಎಲ್ಲಿಂದ ಹೊರಡಬೇಕು ಇಲ್ಲಿದೆ ಮಾಹಿತಿ

ಸುದ್ದಿ ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಕಾರ್ಯಕ್ರಮದ ನಿರುದ್ಯೋಗ ಭತ್ಯೆಯ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಿದ್ದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಜನವರಿ 12 ರಂದು ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ ಉದ್ಘಾಟಿಸಲಿದ್ದಾರೆ.
ನಿರುದ್ಯೋಗ ಭತ್ಯೆಯ ವಿತರಣಾ ಕಾರ್ಯಕ್ರಮ ಸಮಾರಂಭಕ್ಕೆ ಅರ್ಹ ಪಲಾನುಭವಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಇರುತ್ತದೆ
ಅರ್ಹ ಫಲಾನುಭವಿಗಳು ಆಯಾಯ ತಾಲ್ಲೂಕಿನ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಜನವರಿ 12 ಬೆಳಿಗ್ಗೆ 8 ಗಂಟೆಯ ಒಳಗೆ ತಮ್ಮ ಹೆಸರನ್ನು ನೋಂದಾಯಿಸಕೊಳ್ಳಬಹುದಾಗಿದೆ.
ನೋಂದಾಯಿಸಿಕೊಳ್ಳಬಹುದಾದ ಕಾಲೇಜಿನ ವಿವರ ಐ. ಡಿ. ಎಸ್.ಜಿ ಪ್ರಥಮ ದರ್ಜೆ ಕಾಲೇಜು ಚಿಕ್ಕಮಗಳೂರು. ಪ್ರಥಮ ದರ್ಜೆ ಕಾಲೇಜು, ಕಡೂರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ತರೀಕೆರೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎನ್. ಆರ್ ಪುರ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೊಪ್ಪ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿಯನ್ನು (ದೂ. ಸಂ. 08262-295538)ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!