ಸುದ್ದಿ ಕಡೂರು : ತಾಲ್ಲೂಕಿನ ಕಡೂರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೆ.ಪಿ.ನಿರಂಜನ್(ಅಂಜು), ಮತ್ತು ಉಪಾಧ್ಯಕ್ಷರಾಗಿ ಕೆ.ಆರ್. ಶರತ್ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.
ಈ ಹಿಂದೆ ಅಧ್ಯಕ್ಷರಾಗಿದ್ದ ಜಗದೀಶ್ ಮತ್ತು ಉಪಾಧ್ಯಕ್ಷರಾಗಿದ್ದ ಶಶಿಕಲಾ ಅವರ ರಾಜೀನಾಮೆಯಿಂದ ಈ ಸ್ಥಾನಗಳು ತೆರವಾಗಿತ್ತು. ಚುನಾವಣಾಧಿಕಾರಿಯಾಗಿ ಸಹಕಾರ ಅಭಿವೃದ್ದಿ ಅಧಿಕಾರಿ ವಸಂತ ಕಾರ್ಯನಿರ್ವಹಿಸಿದರು.
ಬಳಿಕ ನಡೆದ ಅಭಿನಂದನಾ ಸಭೆಯಲ್ಲಿ ಸಂಘದ ಅಧ್ಯಕ್ಷ ಕೆ.ಪಿ.ನಿರಂಜನ್ ಮಾತನಾಡಿ, ವಾರ್ಷಿಕವಾಗಿ ಒಂದು ಕೋಟಿಗೂ ಹೆಚ್ಚು ಹಾಲು ಉತ್ಪಾದಕರ ಸಂಘದಲ್ಲಿ ವ್ಯವಹಾರ ವಹಿವಾಟು ನಡೆಸಲಾಗುತ್ತಿದೆ. 2022-23 ನೇ ಸಾಲಿನಲ್ಲಿ ಸಂಘವು 16 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಪರಸ್ಪರ ಸಹಕಾರಿ ತತ್ವದಲ್ಲಿ ನಂಬಿಕೆಯಿಟ್ಟು ಆಡಳಿತ ಮಂಡಳಿಯ ಸಹಕಾರದೊಂದಿಗೆ ಸಂಘದ ಅಭಿವೃದ್ಧಿಗೆ ಶ್ರಮಿಸಲಾಗುವುದು. ಕೆ.ಎಂ.ಎಫ್ ಮೂಲಕ ದೊರೆಯುವ ಎಲ್ಲ ಸೌಲಭ್ಯಗಳನ್ನು ಸಂಘದ ಸದಸ್ಯರಿಗೆ ತಲುಪಿಸುವ ಹಾಗೂ ಹಾಲು ಉತ್ಪಾದನೆ ಹೆಚ್ಚಿಸುವ ತಾಂತ್ರಿಕತೆಯನ್ನು ನುರಿತ ತಜ್ಞರಿಂದ ರೈತರಿಗೆ ತಲುಪಿಸುವ ಕೆಲಸವನ್ನು ಮಾಡಲು ಪ್ರಾಮಾನಿಕ ಪ್ರಯತ್ನ ನಡೆಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಕಡೂರಹಳ್ಳಿ ಗ್ರಾಪಂ ಉಪಾಧ್ಯಕ್ಷ ರಾಕೇಶ್, ಸಂಘದ ನಿರ್ದೇಶಕರಾದ ಉಮಾ,ಪಾರ್ವತಮ್ಮ, ಶಿವಕುಮಾರ್, ರುದ್ರಪ್ಪ, ಮಲ್ಲಯ್ಯ, ಶಶಿಕುಮಾರ್, ಶಿವಕುಮಾರ್, ಪ್ರಭಾಕರ್, ಕೆ.ಎನ್.ಜಗದೀಶ್ ಹಾಗೂ ಗ್ರಾಮಸ್ಥರು ಇದ್ದರು.