ದೇಶದ ಸಂವಿಧಾನದ ರಕ್ಷಣೆ ನಮ್ಮೆಲ್ಲರ ಜವಬ್ದಾರಿ – ಕೆ.ಎಸ್. ಆನಂದ್

ಸುದ್ದಿಕಡೂರು : ದೇಶದ ಸಂವಿಧಾನದ ರಕ್ಷಣೆ ನಮ್ಮೆಲ್ಲರ ಜವಬ್ದಾರಿಯಾಗಬೇಕಿದೆ ಎಂದು ಶಾಸಕ ಕೆ.ಎಸ್.ಆನಂದ್ ಅಭಿಪ್ರಾಯಪಟ್ಟರು.
ಪಟ್ಟಣದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತದ ವತಿಯಿಂದ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶದ ಒಕ್ಕೂಟದ ವ್ಯವಸ್ಥೆಯಲ್ಲಿ ನ್ಯಾಯ, ಸ್ವಾತಂತ್ರö್ಯ ಮತ್ತು ಸಮಾನತೆಗೆ ನಮ್ಮ ಬಲವಾದ ಬದ್ದತೆಯನ್ನು ತೋರಿಸುವ ವಿಶೇಷ ದಿನವಾಗಿದೆ. ರಾಷ್ಟçದ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ಎಂ.ಪಿ. ಕವಿರಾಜ್ ಮಾತನಾಡಿದರು. ಪುರಸಭಾ ಸದಸ್ಯ ಭಂಡಾರಿಶ್ರೀನಿವಾಸ್, ಇಒ ಸಿ.ಆರ್.ಪ್ರವೀಣ್, ಸೈಯಾದ್ ಇಕ್ಬಾಲ್, ಆಸಂಧಿಕಲ್ಲೇಶ್, ಸಿಪಿಐ ಶ್ರೀಕಾಂತ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಾಯಿತು.

Leave a Reply

Your email address will not be published. Required fields are marked *

error: Content is protected !!