ತೆರಿಗೆ ಅಧಿಕಾರಿ ನೇತ್ರಾವತಿಯ ಮನೆ ಮೇಲೆ ದಾಳಿ

ಸುದ್ದಿ ಕಡೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ವಾಣಿಜ್ಯ ಅಧಿಕಾರಿಯಾದ ನೇತ್ರಾವತಿ ಮನೆ ಮೇಲೆ ಬುಧವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ‌.

ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿರುವ ನೇತ್ರಾವತಿ ಚಿಕ್ಕಮಗಳೂರು ನಗರದಲ್ಲಿರುವ ಎಪಿಎಂಸಿ ಹಿಂಭಾಗದ ರಸ್ತೆಯಲ್ಲಿರುವ  ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲನೆ ನಡೆಸಿ 900ಗ್ರಾಂ ಚಿನ್ನ, 1ಕೆಜಿಯಷ್ಟು ಬೆಳ್ಳಿ ಹಾಗೂ 5ಲಕ್ಷ ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ. ಕಳೆದ 13ವರ್ಷದಿಂದ ಅಧಿಕ ಅಸ್ತಿ ಹೊಂದಿರುವ ಆರೋಪದಡಿಯಲ್ಲಿ ದಾಳಿ ನಡೆಸಿದ್ದರು ಎನ್ನಲಾಗಿದೆ. ಲೋಕಾಯುಕ್ತ ಇನ್ಸ್ ಸ್ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಲಾಗಿದೆ.

 

Leave a Reply

Your email address will not be published. Required fields are marked *

error: Content is protected !!