ಬೀರೂರಿನಲ್ಲಿ ಅದ್ದೂರಿಯಾಗಿ ಜರುಗಿದ ಸಂವಿಧಾನ ಜಾಗೃತಿ ರಥ ಯಾತ್ರೆ

ಸುದ್ದಿ ಬೀರೂರು: ಪ್ರತಿಯೊಬ್ಬರು ದೇಶದ ಸಂವಿಧಾನಧ ಶ್ರೇಷ್ಠತೆ ಹಾಗೂ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು. ಸಂವಿಧಾನ ಅರಿಯಲು ಜಾಗೃತಿ ಜಾಥಾ ಸಹಕಾರಿ ಎಂದು ತರೀಕೆರೆ ಉಪವಿಭಾಗಾಧಿಕಾರಿ ಹಾಗೂ ಪುರಸಭೆ ಆಡಳಿತಾಧಿಕಾರಿ ಕೆ.ಜೆ.ಕಾಂತರಾಜ್ ಹೇಳಿದರು.

ಅವರು ಬಳ್ಳಿಗನೂರು ಮಾರ್ಗವಾಗಿ ಬೀರೂರು ಪಟ್ಟಣಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ರಥ ಯಾತ್ರೆಯು ಮಾರ್ಗದ ಕ್ಯಾಂಪಿನ ಮಹಾತ್ಮಗಾಂಧಿ ಉದ್ಯಾನವನ ಮುಂಭಾಗ ಆಗಮಿಸಿದಾಗ ತಾಲ್ಲೂಕು ಆಡಳಿತ ಹಾಗೂ ಪುರಸಭೆ ಮತ್ತು ನಾಗರೀಕರೊಂದಿಗೆ ಸೇರಿ ಅವರು ಪುಷ್ಪಾರ್ಚನೆ ಸಲ್ಲಿಸಿ ಬಳಿಕ ಮಾತನಾಡಿದರು.

ಸ್ತ್ರೀ ಶಕ್ತಿ ಸಂಘದ ಮಹಿಳೆಯರು ಜಾಥ ಆಗಮಿಸುತ್ತಿದಂತೆ ಪೂರ್ಣಕುಂಭ ಸ್ವಾಗತ ಕೋರಿ ಪಟ್ಟಣದ ಮಹಾತ್ಮ ಗಾಂಧಿ ವೃತ್ತದಿಂದ ಅಂಬೇಡ್ಕರ್ ಪ್ರತಿಮೆಯವರೆಗು ಮೆರವಣಿಗೆ ನಡೆಯಿತು. ಶಾಲಾ ಕಾಲೇಜು ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಮೇಣದ ಬತ್ತಿ ಹಚ್ಚಿ ವಿವಿಧ ಕಲಾ ತಂಡಗಳೊAದಿಗೆ ಮೆರವಣಿಗೆಯಲ್ಲಿ ಸಾಗಿತು.

ಮೆರವಣಿಗೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು , ಪುರಸಭಾ ಸದಸ್ಯರುಗಳು, ಎಲ್ಲಾ ಸಮಾಜದ ಮುಖಂಡರುಗಳು, ಮೆರವಣಿಗೆ ನೇತೃತ್ವ ವಹಿಸಿದ್ದರು. ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಸ್.ಬಿ.ಯೋಗೀಶ್ ಮಾತನಾಡಿದರು. ಪುರಸಭೆ ಮುಖ್ಯಾಧಿಕಾರಿ ವಿ.ಡಿ.ಶಾಂತಲ, ಪುರಸಭಾ ಸದಸ್ಯ ಬಿ.ಆರ್.ಮೋಹನ್ ಕುಮಾರ್,  ವಕೀಲ ತಿಪ್ಪೇಶ್ . ಬಿ.ಟಿ.ಚಂದ್ರಶೇಖರ್, ಎನ್.ಗಿರೀಶ್,ಬಿ.ಜಿ.ಮೈಲಾರಪ್ಪ, ದಲಿತ ಸಂಘರ್ಷ ಸಮಿತಿಯ ಮೈಸೂರು ವಿಭಾಗದ ಸಂಚಾಲಕ ಮೂರ್ತಿಹಾಳ್ ಕೃಷ್ಣಪ್ಪ ಹಾಗೂ ಪುರಸಭಾ ಸದಸ್ಯರು ಹಾಜರಿದ್ದರು.

 

 

 

 

Leave a Reply

Your email address will not be published. Required fields are marked *

error: Content is protected !!