ಸುದ್ದಿಚಿಕ್ಕಮಗಳೂರು : ಅಂತೂ ಇಂತೂ ಅಳೆದು ತೂಗಿ ಕರಾವಳಿ ಮತ್ತು ಕಾಫಿನಾಡಿನ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ವರಿಷ್ಠರು ಕೋಟಾ ಶ್ರೀನಿವಾಸ ಪೂಜಾರಿಯನ್ನು ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ.
ಬುಧವಾರ ಸಂಜೆ ಬಿಡುಗಡೆಯಾದ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಘೋಷಣೆಯಾಗಿದ್ದು, ಈ ಭಾಗದ ಹಾಲಿ ಸಂಸದೆ ಶೋಭಾ ಅವರಿಗೆ ಬೆಂಗಳೂರು ಉತ್ತರಕ್ಕೆ ಕಣಕ್ಕಿಳಿಸಿ ಪೂಜಾರಿ ಅವರಿಗೆ ಟಿಕೇಟ್ ನೀಡಿರುವುದು ಹಲವು ಲೆಕ್ಕಚಾರಗಳನ್ನು ಹಾಕಿದ ಕೇಂದ್ರದ ನಾಯಕರು ಪಕ್ಷದ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಿದ್ದಾರೆ.
ಒಟ್ಟಾರೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣಾ ಕಣವು ಬಿಜೆಪಿ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಇನ್ನು ಜೆಪಿ ಅವರನ್ನು ಅಧಿಕೃತ ಅಭ್ಯರ್ಥಿ ಎಂದು ಘೊಷಿಸುವುದನ್ನು ಬಾಕಿ ಉಳಿಸಿಕೊಂಡಿದ್ದಾರೆ.