ಸುದ್ದಿ ಚಿಕ್ಕಮಗಳೂರು : ಲೋಕಾಯುಕ್ತ ಕಛೇರಿ ವತಿಯಿಂದ ನವೆಂಬರ್ 8 ರಂದು ಬೆಳಿಗ್ಗೆ 11.೦೦ ಗಂಟೆಗೆ ಚಿಕ್ಕಮಗಳೂರಿನ ಲೋಕಾಯುಕ್ತ ಪೊಲೀಸ್ ಸ್ಟೇಷನ್ ನಲ್ಲಿ ಸಾರ್ವಜನಿಕರಿಗಾಗಿ ಲೋಕಾಯುಕ್ತ ಜನ ಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಕಛೇರಿ, ಚಿಕ್ಕಮಗಳೂರುರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.