ರಾಜ್ಯ ಸರಕಾರ ಅತಿಥಿ ಉಪನ್ಯಾಸಕರುಗಳ ಸಮಸ್ಯೆಗಳನ್ನು ಬಗೆಹರಿಸಿ ಕಡೂರಿನಲ್ಲಿ ಕೆವೈಎಸ್‌ಎಫ್‌ ಆಗ್ರಹ

ಸುದ್ದಿ ಕಡೂರು: ತಾಲ್ಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ಬಾರದ ಕಾರಣ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳಿಗೆ ಸಾಕಷ್ಟು ಸಮಸ್ಯೆಯಾಗುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಸರಕಾರ ಕೂಡಲೇ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಅಖಿಲ ಕರ್ನಾಟಕ ಯುವ ಜನವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಅಜಯ್ ಆಗ್ರಹಿಸಿದರು.

ಪಟ್ಟಣದಲ್ಲಿ ಬುಧವಾರ ತಾಲ್ಲೂಕು ಕಚೇರಿ ಆವರಣದಲ್ಲಿ  ರಾಜ್ಯ ಸರಕಾರಕ್ಕೆ ಗ್ರೇಡ್-2 ತಹಸೀಲ್ದಾರ್ ಮಂಜುನಾಥಸ್ವಾಮಿ ಮೂಲಕ ಮನವಿ ಸಲ್ಲಿಸಿದರು. ವಿದ್ಯಾರ್ಥಿ ಒಕ್ಕೂಟದ ಪದಾಧಿಕಾರಿಗಳಾದ ತೇಜಸ್. ಭರತ್. ರಕ್ಷಿತ್. ಆದಿತ್ಯ. ಲಿಖಿತ್ ಮಹಾಂತೇಶ್ ಇನ್ನಿತರ ಕಾರ್ಯಕರ್ತರು  ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!